ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್ರೋಡ್ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ. “ಅರಿವು” ಕೇವಲ ಒಂದು ಅಭಿಯಾನವಲ್ಲ […]